ಕುಕನೂರು (ಕೊಪ್ಪಳ ಜಿಲ್ಲೆ): ಪೋಸ್ಕೊ ಕಾರ್ಖಾನೆ ಸ್ಥಾಪಿಸಲು ಗದಗ ಜಿಲ್ಲೆಯ ಹಳ್ಳಿಗುಡಿ ಭಾಗದ ಶೇ. 90ರಷ್ಟು ರೈತರು ತಮ್ಮ ಜಮೀನು ನೀಡಲು ಮುಂದಾಗಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರಗೇಶ ನಿರಾಣಿ ಹೇಳಿದ್ದಾರೆ.
ಸಮೀಪದ ಇಟಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪೋಸ್ಕೊ ಸ್ಥಾಪನೆ ಕುರಿತು ಆ ಭಾಗದ ರೈತರು ಸ್ವಯಂಪ್ರೇರಿತರಾಗಿ ಸಂಬಂಧಿಸಿದ ಇಲಾಖೆ, ಮುಖ್ಯಮಂತ್ರಿ ಹಾಗೂ ನನಗೆ ಲಿಖಿತವಾಗಿ ಒಪ್ಪಿಗೆ ಪತ್ರ ನೀಡಿದ್ದಾರೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.