ADVERTISEMENT

ಪೌರ ಕಾರ್ಮಿಕರ ಕಾಯಂ: ಪರಿಶೀಲನೆ ಭರವಸೆ

6 ತಿಂಗಳ ಗಡುವು ಕೇಳಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2014, 19:30 IST
Last Updated 12 ಮಾರ್ಚ್ 2014, 19:30 IST

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ­ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆ­ಯನ್ನು ಕಾಯಂಗೊಳಿಸುವ ಕೋರಿಕೆ­ಯನ್ನು ಆರು ತಿಂಗಳಲ್ಲಿ ಪರಿಶೀಲಿಸು­ವು­ದಾಗಿ ಸರ್ಕಾರ ಹೈಕೋರ್ಟ್‌ಗೆ ಬುಧವಾರ ತಿಳಿಸಿದೆ.

‘ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರ ಸೇವೆ­ಯನ್ನು ಕಾಯಂ ಮಾಡಬೇಕು’ ಎಂದು ಕೋರಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ಮತ್ತು ಪುರ­ಸಭೆಗಳ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ 2006­ರಲ್ಲಿ ಅರ್ಜಿ ಸಲ್ಲಿಸಿ­ದ್ದರು. ಇದರ ವಿಚಾರಣೆ­ಯನ್ನು ನ್ಯಾಯ­ಮೂರ್ತಿ ಕೆ.ಎಲ್‌. ಮಂಜು­ನಾಥ್‌ ಮತ್ತು ನ್ಯಾಯ­ಮೂರ್ತಿ ರವಿ ಮಳಿ­ಮಠ ಅವರಿದ್ದ ವಿಭಾಗೀಯ ಪೀಠ ನಡೆಸಿತ್ತು.

ಕೋರಿಕೆ ಕುರಿತು ನಿಲುವು ತಿಳಿಸು­ವಂತೆ ವಿಭಾಗೀಯ ಪೀಠ ಈ ಹಿಂದೆ ಸರ್ಕಾರಕ್ಕೆ ಸೂಚಿಸಿತ್ತು. ಸರ್ಕಾ­ರದ ಹೇಳಿಕೆ ದಾಖಲು ಮಾಡಿಕೊಂಡ ಪೀಠ, ಅರ್ಜಿ ಇತ್ಯರ್ಥಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.