ADVERTISEMENT

ಪ್ರಚಾರಕ್ಕೆ ಅಡ್ವಾಣಿ, ಮೋದಿ, ಜೇಟ್ಲಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2013, 19:59 IST
Last Updated 15 ಏಪ್ರಿಲ್ 2013, 19:59 IST

ಧಾರವಾಡ: ಭಾರತೀಯ ಜನತಾ ಪಕ್ಷವು ಇದೇ 21 ರಿಂದ ಬಿರುಸಿನ ಪ್ರಚಾರ ನಡೆಸಲಿದೆ. ಪ್ರಚಾರಕ್ಕೆ ಪಕ್ಷದ ಮುಖಂಡರಾದ  ಎಲ್.ಕೆ.ಅಡ್ವಾಣಿ,  ರಾಜನಾಥ ಸಿಂಗ್,  ನರೇಂದ್ರ ಮೋದಿ,  ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

`ಮುಖಂಡರು ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಕೆಲವರ ದಿನಾಂಕವಷ್ಟೇ ನಿಗದಿಯಾಗಿದ್ದು, ಎರಡು ದಿನಗಳಲ್ಲಿ ಎಲ್ಲ ಮುಖಂಡರು ಬರುವ ದಿನಾಂಕ   ಖಚಿತವಾಗಲಿದೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.