ADVERTISEMENT

ಪ್ರತ್ಯೇಕ ಅಪಘಾತ: 3 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2017, 5:35 IST
Last Updated 11 ಡಿಸೆಂಬರ್ 2017, 5:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಇಲ್ಲಿನ ಹಿಂಡಾಲ್ಕೋ ಮೇಲ್ಸೇತುವೆ ಬಳಿ ಭಾನುವಾರ ತಡರಾತ್ರಿ ಕ್ಯಾಂಟರ್- ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಮೃತಪಟ್ಟರು.

ಭಾತಕಾಂಡೆ ಗಲ್ಲಿಯ ಬಾಲಕೃಷ್ಣ ಮಾರುತಿ ಪಿಂಗಟ(24) ಹಾಗೂ ಬಾಪಟ ಗಲ್ಲಿಯ ವಿನಾಯಕ ರಘುನಾಥ ಜಾಧವ(25) ಸ್ಥಳದಲ್ಲೇ ಅಸುನೀಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರತೀಕ ಸುಭಾಷ ಜಾಧವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನಗರ ಪ್ರಕರಣ

ADVERTISEMENT

ರಾಮನಗರ: ತಾಲ್ಲೂಕಿನ ಮಾಯಗಾನಹಳ್ಳಿ ಸಮೀಪ ಸೋಮವಾರ ಬೆಳಿಗ್ಗೆ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಕಂಟೇನರ್‌ಗೆ ಮಿನಿ ಟೆಂಪೊ ಡಿಕ್ಕಿ ಹೊಡೆದು ಕಾರ್ಮಿಕರೊಬ್ಬರು ಸಾವಿಗೀಡಾಗಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರು ನಿವಾಸಿ ಶಿವಕುಮಾರ್ (40) ಮೃತರು‌. ಇವರು ಟೊಯೊಟಾ ಕಂಪೆನಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು, ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.