ADVERTISEMENT

ಪ್ರತ್ಯೇಕ ಅಪಘಾತ 9 ಸಾವು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2011, 13:25 IST
Last Updated 8 ಅಕ್ಟೋಬರ್ 2011, 13:25 IST

ಬೆಂಗಳೂರು (ಪಿಟಿಐ); ಕಳೆದ ರಾತ್ರಿಯಿಂದೇಚೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 9 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ.

ಸಿದ್ದಾಪುರದ ಬಳಿ ಲಾರಿ ಹಾಗೂ ಕಾರಿನ ಮಧ್ಯೆ ಕಳೆದ ರಾತ್ರಿ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಮೃತರಾಗಿ ಒಬ್ಬರು ಗಾಯಗೊಂಡಿದ್ದಾರೆ.

ಟೆಂಪೊ ಒಂದು ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದ ಪರಿಣಾಮ 5 ಮಂದಿ ಮೃತರಾದ ದಾರುಣ ಘಟನೆ ಹಾಸನ ಸಮೀಪ ಶಾಂತನಹಳ್ಳಿಯಲ್ಲಿ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಘಟನೆಯಲ್ಲಿ 9 ಮಂದಿಗೆ ಗಾಯಗಳಾಗಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.