ADVERTISEMENT

ಪ್ರತ್ಯೇಕ ಲಿಂಗಾಯತ ಧರ್ಮ ಕೇಂದ್ರಕ್ಕೆ ಶಿಫಾರಸು: ಲಿಂಗಾಯತ ಮಹಾಸಭಾದಿಂದ ವಿಜಯೋತ್ಸವ, ಕೆಲವು ಕಡೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 11:47 IST
Last Updated 19 ಮಾರ್ಚ್ 2018, 11:47 IST
ಪ್ರತ್ಯೇಕ ಲಿಂಗಾಯತ ಧರ್ಮ ಕೇಂದ್ರಕ್ಕೆ ಶಿಫಾರಸು: ಲಿಂಗಾಯತ ಮಹಾಸಭಾದಿಂದ ವಿಜಯೋತ್ಸವ, ಕೆಲವು ಕಡೆ ಪ್ರತಿಭಟನೆ
ಪ್ರತ್ಯೇಕ ಲಿಂಗಾಯತ ಧರ್ಮ ಕೇಂದ್ರಕ್ಕೆ ಶಿಫಾರಸು: ಲಿಂಗಾಯತ ಮಹಾಸಭಾದಿಂದ ವಿಜಯೋತ್ಸವ, ಕೆಲವು ಕಡೆ ಪ್ರತಿಭಟನೆ   

ಕಲಬುರ್ಗಿ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಜಾಗತಿಕ ಲಿಂಗಾಯತ ಮಹಸಭಾ ಜಿಲ್ಲಾ ಸಮಿತಿ ಸದಸ್ಯರು ಹಾಗೂ ಬಸವಾಭಿಮಾನಿಗಳು ವಿಜಯೋತ್ಸವ ಆಚರಿಸಿದರೆ, ಕೆಲವು ಕಡೆ ಪ್ರತಿಭಟನೆ ವ್ಯಕ್ತವಾಗಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಶ್ರೀಶೈಲ ಸಾರಂಗಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮುಖಂಡರು ಭಾಗವಹಿಸಿದ್ದರು. 

ADVERTISEMENT

ಸಿದ್ದರಾಮಯ್ಯ, ಸಚಿವರಿಗೆ ಚಪ್ಪಲಿ ತೋರಿಸಿ ಪ್ರತಿಭಟನೆ
ಕಲಬುರ್ಗಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಂಡಿರುವ ನಿರ್ಣಯ ಖಂಡಿಸಿ ಮುಖ್ಯಮಂತ್ರಿ ಮತ್ತು ಸಚಿವ ಎಂ.ಬಿ.ಪಾಟೀಲ, ಶರಣಪ್ರಕಾಶ ಪಾಟೀಲರಿಗೆ ಚಪ್ಪಲಿ ತೋರಿಸಿ ಪ್ರತಿಭಟನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.