ADVERTISEMENT

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2017, 19:27 IST
Last Updated 15 ಅಕ್ಟೋಬರ್ 2017, 19:27 IST

ಕೆ.ಆರ್.ನಗರ (ಮೈಸೂರು): ‘ಆಡದೇ ಮಾಡದವನು ಉತ್ತಮ, ಆಡಿಯೂ ಮಾಡದವನು ಅಧಮ ಎಂಬ ಮಾತು ಕನ್ನಡದಲ್ಲಿದೆ. ಆದರೆ, ಪ್ರಧಾನಮಂತ್ರಿ ಹುದ್ದೆ ಕುರಿತು ಗೌರವ ಇರುವುದರಿಂದ ಮೋದಿ ಅವರನ್ನು ಅಧಮ ಎನ್ನಲಾರೆ’ ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್ ವಾಗ್ದಾಳಿ ನಡೆಸಿದರು.

ಇಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ಕಪ್ಪುಹಣ ತಂದು ಜನಸಾಮಾನ್ಯರ ಖಾತೆಗಳಿಗೆ ಹಣ ಹಾಕುತ್ತೇನೆ ಎಂದು ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದಿದ್ದರು. ಅವರು ಹೇಳುವುದೆಲ್ಲ ಸುಳ್ಳು. ಅವರನ್ನು ಏನೆಂದು ಕರೆಯಬೇಕು ಎಂದು ಜನರೇ ತೀರ್ಮಾನಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣನವರ ಪಥದಲ್ಲಿ ಸಾಗುತ್ತಿದ್ದಾರೆ. ಅವರ ಮಂತ್ರಿ ಮಂಡಲ ಅನುಭವ ಮಂಟಪದಂತೆ ಎಂದು ಶ್ಲಾಘಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.