ADVERTISEMENT

ಪ್ರಸಾದ್: ಗುಲ್ಬರ್ಗ ಡಿಸಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 19:59 IST
Last Updated 7 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ (ಪರಿಹಾರ ಮತ್ತು ಪುನರ್ವಸತಿ) ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಡಾ.ಎನ್.ವಿ.ಪ್ರಸಾದ್ ಅವರನ್ನು ಗುಲ್ಬರ್ಗ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ರಿತ್ವಿಕ್ ರಂಜನ್ ದಾಸ್ ಅವರನ್ನು ಗುಲ್ಬರ್ಗ ಜಿಲ್ಲಾಧಿಕಾರಿ ಹುದ್ದೆಗೆ ನೇಮಕ ಮಾಡಿ ಆಗಸ್ಟ್ 31ರಂದು ಹೊರಡಿಸಿದ್ದ ಆದೇಶವನ್ನು ರದ್ದು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.