ADVERTISEMENT

ಬಸ್-ಬೈಕ್ ಡಿಕ್ಕಿ: ಕಂದಾಯ ನಿರೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ಮದ್ದೂರು: ಕೆಎಸ್‌ಆರ್‌ಟಿಸಿ  ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಕಂದಾಯ ನಿರೀಕ್ಷಕ ಮೃತಪಟ್ಟು, ಹಿಂಬದಿ ಸವಾರ ತೀವ್ರ ಗಾಯಗೊಂಡ ಘಟನೆ ಉಪ್ಪಿನಕೆರೆ ಗೇಟ್ ಬಳಿ ಭಾನುವಾರ ನಡೆದಿದೆ.

ಚನ್ನಪಟ್ಟಣದ ಪುರಸಭೆಯ ಕಂದಾಯ ನಿರೀಕ್ಷಕ ರವಿಕುಮಾರ್ (35) ಮೃತಪಟ್ಟವರು. ಗಾಯಗೊಂಡ ಹಿಂಬದಿ ಸವಾರ ಶ್ರೀನಿವಾಸ್ ಕೂಡ ಕಂದಾಯ ನಿರೀಕ್ಷಕರಾಗಿದ್ದಾರೆ. ಇವರನ್ನು ಬೆಂಗಳೂರಿನ ನಿಮ್ಹಾನ್ಸ್‌ಗೆ ಕರೆದೊಯ್ಯಲಾಗಿದೆ. ಶಿಂಷಾಕ್ಕೆ ಚನ್ನಪಟ್ಟಣದಿಂದ ಬೈಕ್‌ನಲ್ಲಿ ತೆರಳಿದ್ದ ಇವರು ಸಂಜೆ 6.30ರ ಸಮಯದಲ್ಲಿ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.