ತುಮಕೂರು: ತುಮಕೂರಿನಲ್ಲಿ ದುಷ್ಕರ್ಮಿಗಳು ಬಾಲಕಿ ಮೇಲೆ ಬುಧವಾರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ತುಮಕೂರಿನ ಯಲ್ಲಾಪುರದಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯಲ್ಲಿ ಬುಧವಾರ ರಾತ್ರಿ ಐದು ಮಂದಿ ಈ ಕೃತ್ಯ ಎಸಗಿದ್ದಾರೆ.
ಹರೀಶ್, ಮಧು, ಕೇಶವ್, ಚಿದಾನಂದ, ಚಂದು ಅತ್ಯಾಚಾರ ಮಾಡಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಯಲ್ಲಾಪುರ, ಅಂತರಸನಹಳ್ಳಿ, ತಿಮ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ.
ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಹರಿಶ್ ಮತ್ತು ಚಿದಾನಂದನನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.