ADVERTISEMENT

ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌ರನ್ನು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 10:21 IST
Last Updated 10 ಮಾರ್ಚ್ 2018, 10:21 IST
ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌
ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌   

ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ.ಯು.ಆರ್‌. ರಾವ್‌ ಜನ್ಮ ದಿನದ (ಮಾರ್ಚ್‌ 10) ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

‘ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ದೇಶದ ಪ್ರಪ್ರಥಮ ಉಪಗ್ರಹ ಆರ್ಯಭಟದ ರೂವಾರಿಗಳೂ ಆದ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಉಡುಪಿ ರಾಮಚಂದ್ರರಾವ್ ಅವರ ಜನ್ಮ ದಿನದಂದು ನಾಡು ಅವರ ಸೇವೆಯನ್ನು ಹೆಮ್ಮೆಯಿಂದ ಸ್ಮರಿಸುತ್ತದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT