
ಪ್ರಜಾವಾಣಿ ವಾರ್ತೆಬೆಂಗಳೂರು: ರಾಜ್ಯ ಪದಾಧಿಕಾರಿಗಳು, ವಿವಿಧ ಘಟಕಗಳ ರಾಜ್ಯ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕೋರ್ ಕಮಿಟಿ ಹಾಗೂ ಜಿಲ್ಲೆ, ತಾಲ್ಲೂಕು ಅಧ್ಯಕ್ಷರು ಮತ್ತು ಜಿಲ್ಲೆ, ತಾಲ್ಲೂಕು ಅಧ್ಯಕ್ಷರನ್ನೊಳಗೊಂಡ ಎಲ್ಲಾ ಸಮಿತಿಗಳನ್ನು ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸೋಮವಾರ ವಿಸರ್ಜಿಸಿದೆ.
ಹೊಸ ಪದಾಧಿಕಾರಿಗಳ ನೇಮಕ ಮತ್ತು ವಿವಿಧ ಘಟಕಗಳ ಪುನರ್ರಚನೆ ಆಗುವವರೆಗೆ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಮೊದಲಿನಂತೆ ಸಹಕರಿಸಬೇಕು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.