ADVERTISEMENT

ಬಿಎಸ್‌ವೈ ಜಾಮೀನು ಅರ್ಜಿ ವಿಚಾರಣೆ ಅ.20ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2011, 5:15 IST
Last Updated 18 ಅಕ್ಟೋಬರ್ 2011, 5:15 IST

ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನಿರಾಕರಿಸಿದ ಕ್ರಮ ಕುರಿತು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ಅಕ್ಟೋಬರ್ 20ಕ್ಕೆ ಮುಂದೂಡಿತು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 20ಕ್ಕೆ ನಿಗದಿಪಡಿಸಿತು. ಈ ಸಂದರ್ಭದಲ್ಲಿ ಹೈಕೋರ್ಟ್‌ನಲ್ಲಿ ಹಾಜರಿದ್ದ ಯಡಿಯೂರಪ್ಪ ಪರ ವಕೀಲ ರವಿ.ಬಿ.ನಾಯಕ್ ಅವರು ಯಡಿಯೂರಪ್ಪನವರಿಗೆ ಜಾಮೀನು ನೀಡುವಂತೆ ಮನವಿ ಮಾಡಿಕೊಂಡರೆ, ವಕೀಲ ಸಿರಾಜಿನ್ ಬಾಷಾ ಪರ ವಕೀಲರು ಜಾಮೀನು ನೀಡಬಾರದೆಂದು ಆಕ್ಷೇಪಣೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.