ADVERTISEMENT

ಬಿಎಸ್‌ವೈ ವಿರುದ್ಧ ಶಿವಪ್ಪ ಪ್ರವಾಸ

​ಪ್ರಜಾವಾಣಿ ವಾರ್ತೆ
Published 8 ಜನವರಿ 2012, 19:30 IST
Last Updated 8 ಜನವರಿ 2012, 19:30 IST

ಮೈಸೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿರುವುದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದನ್ನು ರಾಜ್ಯದ ಜನತೆಗೆ ಮನವರಿಕೆ ಮಾಡಿಕೊಡಲು ಜ.16 ರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತೇನೆ~ ಎಂದು ಬಿಜೆಪಿಯ ಹಿರಿಯ ಮುಖಂಡ ಬಿ.ಬಿ.ಶಿವಪ್ಪ ಭಾನುವಾರ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಹಿರಿಯರ ವೇದಿಕೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಕೂಡಲೇ ಯಡಿಯೂರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು. ಯಡಿಯೂರಪ್ಪ ಪಕ್ಷದಲ್ಲಿ ಇರಲಿ ಬಿಡಲಿ, ಬಿಜೆಪಿ ಶಾಶ್ವತವಾಗಿ ಇರುತ್ತದೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT