ADVERTISEMENT

ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಜಾಮೀನು

​ಪ್ರಜಾವಾಣಿ ವಾರ್ತೆ
Published 21 ಜೂನ್ 2012, 10:50 IST
Last Updated 21 ಜೂನ್ 2012, 10:50 IST
ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಜಾಮೀನು
ಬಿ.ಎಸ್. ಯಡಿಯೂರಪ್ಪಗೆ ಹೈಕೋರ್ಟ್ ಜಾಮೀನು   

ಬೆಂಗಳೂರು: ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.  

ಜಿಂದಾಲ್ ಸಮೂಹದ ಗಣಿ ಕಂಪೆನಿಯಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ. ರಾಘವೇಂದ್ರ ಬಿ.ವೈ. ವಿಜಯೇಂದ್ರ ಹಾಗೂ ಅಳಿಯ ಸೋಹನ್‌ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

ಸಿಬಿಐ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಹಿನ್ನೆಲೆಯಲ್ಲಿ, ಅವರೆಲ್ಲ ಹೈಕೋರ್ಟ್ ಮೊರೆ ಹೋಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.