ADVERTISEMENT

ಬಿಜೆಪಿಗೆ ಜೆಡಿಎಸ್ ಬೆಂಬಲ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2011, 19:30 IST
Last Updated 17 ಮಾರ್ಚ್ 2011, 19:30 IST

ವಿಜಾಪುರ: ‘ಯಡಿಯೂರಪ್ಪ ಪಕ್ಷದಿಂದ ನಿರ್ಗಮಿಸಿದರೆ ಬಿಜೆಪಿಗೆ ಬೆಂಬಲ ನೀಡಲು ಜೆಡಿಎಸ್ ಮರು ಚಿಂತನೆ ನಡೆಸುತ್ತಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.‘ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಯಡಿಯೂರಪ್ಪ ಹಗರಣಗಳ ವಿರುದ್ಧ ಆ ಪಕ್ಷದ ಶಾಸಕರೇ ಸಿಡಿದೆದ್ದಿದ್ದಾರೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಅವರು ಪಕ್ಷವನ್ನು ಒಡೆದು 15-20 ಜನ ಶಾಸಕರೊಂದಿಗೆ ಹೊರಹೋಗಬಹುದು ಎಂಬ ಆತಂಕ ಶಾಸಕರಲ್ಲಿದೆ. ಆ ಪರಿಸ್ಥಿತಿ ಎದುರಾದರೆ ತಮಗೆ ಬೆಂಬಲ ನೀಡುವಂತೆ ಬಿಜೆಪಿ ಶಾಸಕರು ಕೋರಿದ್ದಾರೆ’ ಎಂದು ಗುರುವಾರ ಇಲ್ಲಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.