ಬೀದರ್: ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಳ್ಳಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಪ್ರಭಾವಿ ರಾಜಕಾರಣಿಯಾಗಿರುವ ನಾಗಮಾರಪಳ್ಳಿ ಅವರ ಈ ನಿರ್ಧಾರದೊಂದಿಗೆ ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆಯಾದಂತಾಗಿದೆ. ಅವರು ಔರಾದ್ ಕ್ಷೇತ್ರದಿಂದ ನಾಲ್ಕು ಬಾರಿ ಮತ್ತು ಬೀದರ್ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿ ಆಯ್ಕೆ ಆಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.