ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕೂಡಲೇ ಬಿಜೆಪಿ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಎಡಿಜಿಪಿ ಅಮರ್ ಕುಮಾರ್ ಪಾಂಡೆ ಹಾಗೂ ಡಿಐಜಿ ಸಂದೀಪ್ ಪಾಟೀಲ್ ಗುಪ್ತಚರ ಇಲಾಖೆಗೆ ವರ್ಗವಾಗಿದ್ದರೆ, ಡಿ.ದೇವರಾಜ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗಕ್ಕೆ ಹಾಗೂ ಡಿಸಿಪಿ ಎಸ್.ಗಿರೀಶ್ ಅವರನ್ನು ಈಶಾನ್ಯ ವಿಭಾಗಕ್ಕೆ ವರ್ಗ ಮಾಡಲಾಗಿದೆ.
ಕೆ.ಅಣ್ಣಾಮಲೈ ಅವರನ್ನು ರಾಮನಗರದ ಎಸ್ಪಿ ಆಗಿ ಸರ್ಕಾರ ವರ್ಗಾವಣೆ ಮಾಡಿದೆ. ಕಾಂಗ್ರೆಸ್ ಶಾಸಕರು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ನಲ್ಲಿ ಬಿಡಾರ ಹೂಡಿದ್ದಾರೆ. ರೆಸಾರ್ಟ್ ಪ್ರದೇಶ ರಾಮನಗರ ಜಿಲ್ಲಾ ವ್ಯಾಪ್ತಿಗೆ ಬರುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.