ಬೆಂಗಳೂರು: ಕರ್ನಾಟಕದ ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿಯ ಜಾಹೀರಾತುಗಳಲ್ಲಿರುವ ಆಕ್ಷೇಪಾರ್ಹ ಅಂಶಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರನ್ನು ಪರಿಶೀಲಿಸಿದ ಆಯೋಗವು ಸುದ್ದಿ ವಾಹಿನಿಗಳಿಗೆ ಬಿಜೆಪಿ ನೀಡಿರುವ ಜಾಹೀರಾತುಗಳನ್ನು ತಕ್ಷಣದಿಂದಲೇ ವಾಪಾಸು ಪಡೆದಿದೆ. ಅದೇ ವೇಳೆ ಈ ಜಾಹೀರಾತುಗಳನ್ನು 24ಗಂಟೆಗಳೊಳಗೆ ಪುನರ್ ಪರಿಶೀಲನೆಗೊಳಪಡಿಸುವಂತೆ ಪೂರ್ವದೃಢೀಕರಣ ಸಮಿತಿಗೆ ಆದೇಶಿಸಿದೆ.
ಫೇಸ್ಬುಕ್, ವಾಟ್ಸಪ್ ಸೇರಿದಂತೆ ಇತರ ಸಾಮಾಜಿಕ ಮಾಧ್ಯಮಗಳು ಮತ್ತು ಆನ್ಲೈನ್ ಮಾಧ್ಯಮಗಳಲ್ಲಿಯೂ ಈ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಮುಖ್ಯಸ್ಥರಿಗೆ ಆದೇಶ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.