ಯಾದಗಿರಿ: ಯಾದಗಿರಿ ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಶರಣಭೂಪಾಲರಡ್ಡಿ ತೆರಳುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಶರಣಭೂಪಾಲರಡ್ಡಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಯಾದಗಿರಿ ಜಿಲ್ಲೆ ಇಬ್ರಾಹಿಮಪುರ ಕ್ರಾಸ್ ಬಳಿ ಭಾನುವಾರ ಈ ಘಟನೆ ಸಂಭವಿಸಿದೆ.
ಒಂದು ತಿಂಗಳ ಹಿಂದೆ ಶರಣಭೂಪಾಲರಡ್ಡಿ ನೂತನ ಪೋರ್ಡ್ ಎಂಡೇವಿಯರ್ ಕಾರು ಖರೀದಿಸಿದ್ದರು. ಘಟನೆಯಲ್ಲಿ ₹40 ಲಕ್ಷ ಮೌಲ್ಯ ಕಾರು ಭಸ್ಮಗೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.