ADVERTISEMENT

ಬಿಜೆಪಿ ತೊರೆಯಲು ಟಪಾಲ್ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 19:30 IST
Last Updated 13 ಜನವರಿ 2012, 19:30 IST

ಬಳ್ಳಾರಿ: ಇದೇ 15ರ ನಂತರ ತಾವು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಇತ್ತೀಚೆಗಷ್ಟೇ ಆ ಪಕ್ಷ ಸೇರಿದ್ದ ಗಣಿ ಉದ್ಯಮಿ ಟಪಾಲ್ ಗಣೇಶ್ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಪಕ್ಷದಲ್ಲಿನ ಜಾತಿ ರಾಜಕೀಯ ಅಸಹ್ಯ ಹುಟ್ಟಿಸುವಂತಿದೆ. ಜಾತಿ ಪ್ರಭಾವ ಇದ್ದವರು ಮಾತ್ರ ರಾಜಕಾರಣದಲ್ಲಿರಬೇಕು ಎನ್ನುವಂತಹ ವಾತಾವರಣವಿದೆ. ಇದರಿಂದ ಬೇಸತ್ತು ಆ ಪಕ್ಷದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದೇನೆ~ ಎಂದು ಅವರು ನುಡಿದರು.

ಬೇರೆ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹೋರಾಟಗಾರರಿಗೆ ರಾಜಕೀಯ ಸರಿ ಹೊಂದುವುದಿಲ್ಲ ಎಂಬುದು ತಮಗೆ ಮನವರಿಕೆಯಾಗಿದೆ ಎಂದರು.

ಬಳ್ಳಾರಿ ಕಾಯ್ದಿಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಗ್ರಾಮಗಳ ಸರಹದ್ದು ಗುರುತಿಸಿ, ಆ ಭಾಗದಲ್ಲಿ ನಡೆದಿರುವ ರಾಜ್ಯದ ಖನಿಜ ಸಂಪತ್ತಿನ ಲೂಟಿಯ ಬಗ್ಗೆ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಸದಾನಂದಗೌಡ ಅವರನ್ನು ಒತ್ತಾಯಿಸಿದರು.

ಸಾವಿರಾರು ಕೋಟಿ ರೂಗಳ ಖನಿಜ ಸಂಪತ್ತು ಲೂಟಿಯಾಗಿದೆ. ತನಿಖೆಗೆ ಯು.ವಿ. ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.