ಮಂಗಳೂರು: ‘ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್ಶೀಟ್ನಲ್ಲಿ ನನ್ನ ಭಾವಚಿತ್ರ ಹಾಗೂ ಹೆಸರನ್ನು ಅನಗತ್ಯವಾಗಿ ಬಳಸುವ ಮೂಲಕ ಮಾನಸಿಕ ಹಿಂಸೆ ನೀಡಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ’ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ‘ಬಿಜೆಪಿಯ ಚಾರ್ಜ್ಶೀಟ್ನಲ್ಲಿ ನನಗೆ ಸಂಬಂಧವೇ ಇಲ್ಲದ ವಿಷಯಕ್ಕೆ ನನ್ನ ಫೋಟೊ, ಹೆಸರು ಬಳಕೆ ಮಾಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.