ADVERTISEMENT

ಬಿಜೆಪಿ ಮುಖಂಡರು ಸಂಪರ್ಕದಲ್ಲಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2013, 10:48 IST
Last Updated 11 ಜುಲೈ 2013, 10:48 IST
ಬಿಜೆಪಿ ಮುಖಂಡರು ಸಂಪರ್ಕದಲ್ಲಿ
ಬಿಜೆಪಿ ಮುಖಂಡರು ಸಂಪರ್ಕದಲ್ಲಿ   

ಬೆಂಗಳೂರು (ಪಿಟಿಐ): ಬಿಜೆಪಿ ಮರಳುವ ಕುರಿತಂತೆ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಮೌನ ಮುರಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಮರಳುವ ಒಲವು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿಯ ಕೆಲ ರಾಷ್ಟ್ರೀಯ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಗುರುವಾರ ತಿಳಿಸಿದರು.

ಬಿಜೆಪಿಗೆ ಮರಳುವುದಕ್ಕೆ ಸಂಬಂಧಿಸಿದಂತೆ `ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ' ತೆಗೆದುಕೊಳ್ಳುತ್ತೇನೆ ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಮುಖ್ಯಸ್ಥರು ಆಗಿರುವ ಯಡಿಯೂರಪ್ಪ ಹೇಳಿದರು.

`ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಕೆಲ ರಾಷ್ಟ್ರೀಯ ನಾಯಕರೊಂದಿಗೆ ನಾನು ಈಗಾಗಲೇ (ಪಕ್ಷಕ್ಕೆ ಮರಳುವ ಕುರಿತಂತೆ) ಹಲವಾರು ಬಾರಿ ಮಾತುಕತೆ ನಡೆಸಿದ್ದೇನೆ. ಆದರೆ ಇವರೆಗೆ ನಾನು ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ನನ್ನ ಪಕ್ಷದ ಇತರೆ ಮುಖಂಡರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುತ್ತೇನೆ' ಎಂದು ಅವರು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿಯ ಒಂದು ಬಣದ ನಾಯಕರು ಯಡಿಯೂರಪ್ಪ ಅವರನ್ನು ಬಿಜೆಪಿಗೆ ಮರಳಿ ಕರೆತರುವ ನಿಟ್ಟಿನಲ್ಲಿ ಕಳೆದ ಕೆಲ ವಾರಗಳಿಂದ ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.