ADVERTISEMENT

‘ಬಿಜೆಪಿ ಸೋಲಿಸಿದರೆ ಆಂಧ್ರಕ್ಕೆ ನ್ಯಾಯ’

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 19:30 IST
Last Updated 29 ಮಾರ್ಚ್ 2018, 19:30 IST

ಬೆಂಗಳೂರು: ‘ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಠೇವಣಿ ಸಿಗದಂತೆ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಪಾಠ ಕಲಿಸಿದರೆ ಮಾತ್ರ ಆಂಧ್ರಪ್ರದೇಶಕ್ಕೆ ನ್ಯಾಯ ಸಿಗಲಿದೆ’ ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಘುವೀರ ರೆಡ್ಡಿ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ತೆಲುಗು ಭಾಷಿಕರು ಇದ್ದಾರೆ. ‘ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ’ ಎಂದು ಎಲ್ಲ ಜಿಲ್ಲೆಗಳಲ್ಲೂ ಓಡಾಡಿ, ಪ್ರಚಾರ ಮಾಡಲು ಆಂಧ್ರದ 20ಕ್ಕೂ ಹೆಚ್ಚು ನಾಯಕರು ರಾಜ್ಯದಲ್ಲಿ ಬೀಡು ಬಿಡಲಿದ್ದಾರೆ ಎಂದು ತಿಳಿಸಿದರು.

ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಇಲ್ಲಿಯವರೆಗೆ ನಿಜ ಹೇಳುವ ಅಭ್ಯಾಸವೇ ಇಲ್ಲ ಎಂದೂ ರೆಡ್ಡಿ ಕುಟುಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.