ADVERTISEMENT

ಬೀದರ್‌ ಜಿಲ್ಲೆಯಲ್ಲಿ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2017, 19:30 IST
Last Updated 13 ಜೂನ್ 2017, 19:30 IST
ಬೀದರ್‌ ಜಿಲ್ಲೆಯಲ್ಲಿ ಭಾರಿ ಮಳೆ
ಬೀದರ್‌ ಜಿಲ್ಲೆಯಲ್ಲಿ ಭಾರಿ ಮಳೆ   

ಬೆಂಗಳೂರು: ರಾಜ್ಯದ ಬೀದರ್‌ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕು ಹೆಬ್ಬಾಳ ಬಳಿಯ ಬೆಣ್ಣೆತೊರಾ  ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಜಲಾಶಯ ದಿಂದ ಮಂಗಳವಾರ 2,330 ಕ್ಯುಸೆಕ್‌ ನೀರನ್ನು ನದಿಗೆ ಹರಿಬಿಡಲಾಗಿದೆ.

‘ಜಲಾಶಯದ ಸದ್ಯದ ಒಳಹರಿವು 6,016 ಕ್ಯುಸೆಕ್‌ ಇದ್ದು, ಹೊರಹರಿವು 2,330 ಕ್ಯುಸೆಕ್‌ ಇದೆ. ನೀರು ಬಿಡುಗಡೆಯಿಂದ ಹಳೆ ಹೆಬ್ಬಾಳ, ಚಿಂಚೋಳಿ (ಎಚ್) ಸೇರಿ ಹಲವು ಗ್ರಾಮಗಳು ಸಂಪರ್ಕ ಕಡೆದುಕೊಳ್ಳುವ ಭೀತಿಯಲ್ಲಿವೆ’ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಪ್ರೇಮಸಿಂಗ್ ತಿಳಿಸಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆ ಸುರಿಯಿತು. 24 ಗಂಟೆಗಳ ಅವಧಿಯಲ್ಲಿ ಬೀದರ್‌ ತಾಲ್ಲೂಕಿನಲ್ಲಿ 128 ಮಿ.ಮೀ ಮಳೆ ಸುರಿದಿದೆ. ಮಾಂಜರಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ.

ADVERTISEMENT

ಸೋಮವಾರ ರಾತ್ರಿ ಸುರಿದ ಮಳೆಗೆ ಬೀದರ್‌ ನಗರದ ಕೆಲ ರಸ್ತೆಗಳು ಕೊಚ್ಚಿ ಹೋಗಿವೆ. ರಸ್ತೆ ಮಧ್ಯೆ ತಗ್ಗು ಬಿದ್ದು ಕೆಲ ಹೊತ್ತು ಸಂಚಾರ ಸ್ಥಗಿತಗೊಂಡಿತ್ತು.

ಉತ್ತಮ ಮಳೆ: ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.  ಭಾಗಮಂಡಲ, ತಲಕಾವೇರಿ, ನಾಪೋಕ್ಲು, ಗೋಣಿಕೊಪ್ಪ ಬೆಟ್ಟಗೇರಿ, ಸಂಪಾಜೆ ಭಾಗದಲ್ಲಿ ಸಂಜೆಯ ವೇಳೆ ಬಿರುಸಾಗಿ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.