ADVERTISEMENT

ಬೀದರ್ ಜಿಲ್ಲೆಯ ಇನ್ನಿಬ್ಬರಿಗೆ ಸಚಿವ ಸ್ಥಾನ ಕೊಡಿ

ಶಾಸಕರಾದ ಈಶ್ವರ, ರಹೀಂ, ನಾರಾಯಣರಾವ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜೂನ್ 2018, 10:47 IST
Last Updated 9 ಜೂನ್ 2018, 10:47 IST
ಬೀದರ್ ಜಿಲ್ಲೆಯ ಇನ್ನಿಬ್ಬರಿಗೆ ಸಚಿವ ಸ್ಥಾನ ಕೊಡಿ
ಬೀದರ್ ಜಿಲ್ಲೆಯ ಇನ್ನಿಬ್ಬರಿಗೆ ಸಚಿವ ಸ್ಥಾನ ಕೊಡಿ   

ಬೀದರ್‌: ‘ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ದಿಸೆಯಲ್ಲಿ  ಬೀದರ್‌ ಜಿಲ್ಲೆಯ ಇನ್ನಿಬ್ಬರು ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು’ ಎಂದು ಜಿಲ್ಲೆಯ ಮೂವರು ಶಾಸಕರು ಶನಿವಾರ ಆಗ್ರಹಿಸಿದರು. 

‘ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ನಾಲ್ಕು  ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಮೂರು ಬಾರಿ ಗೆದ್ದಿರುವ ಶಾಸಕರಿಗೆ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನಕೊಡಬೇಕು’ ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ, ಬೀದರ್‌ ಶಾಸಕ ರಹೀಂ ಖಾನ್‌ ಹಾಗೂ ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌  ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಒತ್ತಾಯಿಸಿದರು.

‘22 ತಿಂಗಳ ಅವಧಿಗೆ ಪೌರಾಡಳಿತ ಸಚಿವನಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇನೆ. ಇನ್ನು ಹೆಚ್ಚಿನ ಕೆಲಸ ಮಾಡಲು ಪೂರ್ಣಾವಧಿ ಸಚಿವನಾಗಲು ಅವಕಾಶ ಕಲ್ಪಿಸಬೇಕು. ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಸ್ಥಾನ ವಹಿಸಿದ್ದೇನೆ. ನನಗೆ ಸಚಿವ ಸ್ಥಾನ ಕೊಡುವಂತೆ ಈಗಾಗಲೇ ನಾಲ್ವರು ಶಾಸಕರು ಪಕ್ಷದ ವರಿಷ್ಠರಿಗೆ ಲಿಖಿತ ಮನವಿ ಕೊಟ್ಟಿದ್ದಾರೆ’ ಎಂದು ಈಶ್ವರ ಖಂಡ್ರೆ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.