ನಾಗಮಂಗಲ (ಮಂಡ್ಯ): ಬೆಳ್ಳೂರು ಹೋಬಳಿಯ ಗಂಗಾಧರನಗರದ ಬುದ್ಧಿಮಾಂದ್ಯ ಬಾಲಕಿಯನ್ನು ಗುರುವಾರ ಕರೆದೊಯ್ದ ಯುವಕರಿಬ್ಬರು ತುರುವೇಕೆರೆ ತಾಲ್ಲೂಕಿನ ಡಣಾಯಕನಪುರದ ಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಆರೋಪಿಗಳಾದ ಮಂಜ, ಕುಮಾರ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿ ಗ್ರಾಮದ ಸನಿಹದಲ್ಲಿದ್ದ ಅಯ್ಯನಕಟ್ಟೆಯಲ್ಲಿ ಬಟ್ಟೆ ಒಗೆಯಲು ಹೋದಾಗ ಆರೋಪಿಗಳು, ಆಕೆಯ ಮುಖಕ್ಕೆ ಬಟ್ಟೆ ಕಟ್ಟಿ ಬೆಟ್ಟಕ್ಕೆ ಕರೆದೊಯ್ದಿದ್ದಾರೆ. ಬಾಲಕಿಯನ್ನು ಬೈಕ್ನಲ್ಲಿ ಕರೆದೊಯ್ಯುತ್ತಿರುವುದನ್ನು ಕಂಡ ಸ್ಥಳೀಯರು ಬೆಟ್ಟದ ಬಳಿ ಹೋಗಿ ಹುಡುಕಿದ್ದಾರೆ. ಬಾಲಕಿಯನ್ನು ರಕ್ಷಿಸಿದ ಜನರು ಆರೋಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.