ADVERTISEMENT

ಬುಧವಾರ ನೂತನ ಸಂಪುಟ ಅಸ್ತಿತ್ವಕ್ಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2018, 14:25 IST
Last Updated 1 ಜೂನ್ 2018, 14:25 IST
ಬುಧವಾರ ನೂತನ ಸಂಪುಟ ಅಸ್ತಿತ್ವಕ್ಕೆ
ಬುಧವಾರ ನೂತನ ಸಂಪುಟ ಅಸ್ತಿತ್ವಕ್ಕೆ   

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟ ಬುಧವಾರ ಮಧ್ಯಾಹ್ನ 2:30ಕ್ಕೆ ಗಂಟೆಗೆ ಅಸ್ತಿತ್ವಕ್ಕೆ ಬರಲಿದೆ. ನಗರದಲ್ಲಿ ಬುಧವಾರ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

‘ಪರಮೇಶ್ವರ್ ಅವರೊಡನೆ ನಾನು ರಾಜ್ಯಪಾಲರನ್ನು ಭೇಟಿಯಾಗಿ ಪ್ರಮಾಣ ವಚನ ಸಮಾರಂಭಕ್ಕೆ ಸಮಯ ಕೋರಿದೆ. ರಾಜ್ಯಪಾಲರು ನವದೆಹಲಿಯಲ್ಲಿ ನಡೆಯಲಿರುವ ರಾಜ್ಯಪಾಲರ ಸಭೆಗೆ ತೆರಳುತ್ತಿದ್ದಾರೆ. ಹೀಗಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ’ ಎಂದು ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಪೂರ್ಣ ಮಂತ್ರಿಮಂಡಲ ಕೆಲಸ ಶುರು ಮಾಡುತ್ತದೆ. ಜೆಡಿಎಸ್‌ನ 12 ಮತ್ತು ಕಾಂಗ್ರೆಸ್‌ನ 22 ಮಂದಿ ಅಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ADVERTISEMENT

‘ಯಾವ ಖಾತೆಯನ್ನು ಯಾರು ನಿರ್ವಹಿಸಬೇಕು ಎನ್ನುವುದನ್ನು ಆಯಾ ಪಕ್ಷಗಳ ವರಿಷ್ಠರು ತೀರ್ಮಾನಿಸಲಿದ್ದಾರೆ’ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸ್ಪಷ್ಟಪಡಿಸಿದರು. 

[related]‍‍‍‍‍‍‍‍‍‍‍

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.