ADVERTISEMENT

ಬುರುಡೆ ಶಂಕರ ನಿಮ್ಮೂರಲ್ಲೇ ಇದ್ದಾನೆ: ಕಾಗೋಡು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2017, 19:30 IST
Last Updated 15 ಅಕ್ಟೋಬರ್ 2017, 19:30 IST
ಬುರುಡೆ ಶಂಕರ ನಿಮ್ಮೂರಲ್ಲೇ ಇದ್ದಾನೆ: ಕಾಗೋಡು
ಬುರುಡೆ ಶಂಕರ ನಿಮ್ಮೂರಲ್ಲೇ ಇದ್ದಾನೆ: ಕಾಗೋಡು   

ಶಿಕಾರಿಪುರ: ‘ರಾಜ್ಯ ಸರ್ಕಾರದಿಂದ ರೈತರ ಸಾಲ ಮನ್ನಾ ಆಗಿಲ್ಲ ಎಂದು ಬುರುಡೆ ಬಿಡುವ ಬುರುಡೆ ಶಂಕರ ನಿಮ್ಮೂರಲ್ಲೇ ಇದ್ದಾನೆ’ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆದ ತಾಲ್ಲೂಕು ಕಾಂಗ್ರೆಸ್‌ ಬೂತ್‌ ಕಮಿಟಿ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಲದ ಹೊರೆಯನ್ನು ಇಳಿಸಿದ್ದಾರೆ. ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಆಗಿ, ರೈತರು ಹೊಸ ಸಾಲ ಪಡೆದಿದ್ದಾರೆ. ಆದರೆ, ಸಾಲ ಮನ್ನಾದ ಹಣವನ್ನು ಸೊಸೈಟಿಗಳಿಗೆ ಸರ್ಕಾರ ಕೊಟ್ಟಿಲ್ಲ ಎಂದು ನಿಮ್ಮ ಊರಿನ ನಾಯಕ ಬುರುಡೆ ಬಿಡುತ್ತಿದ್ದಾನೆ. ಆ ನಾಯಕನಿಗೆ ಏನು ಹೇಳಬೇಕು’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.