ADVERTISEMENT

ಬೆಂಬಲ ವಾಪಸ್ ಚಿಂತನೆ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2012, 19:40 IST
Last Updated 13 ಡಿಸೆಂಬರ್ 2012, 19:40 IST

ಶ್ರೀರಂಗಪಟ್ಟಣ:  ರಾಜ್ಯ ಸರ್ಕಾರಕ್ಕೆ ಕೆಜೆಪಿ ಬೆಂಬಲ ಮುಂದುವರಿಸಬೇಕೆ? ಬೇಡವೆ? ಎಂಬ ಬಗ್ಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಕರ್ನಾಟಕ ಜನತಾ ಪಕ್ಷದ ಪ್ರಮುಖರ ಸಭೆ ಬೆಂಗಳೂರಿನಲ್ಲಿ ಶೀಘ್ರ ನಡೆಯಲಿದೆ. ಪೂರ್ಣ ಪ್ರಮಾಣದಲ್ಲಿ ಪಕ್ಷದ ರಾಜ್ಯ ಸಮಿತಿಯನ್ನು ರಚಿಸುವುದು ಹಾಗೂ ರಾಜ್ಯ ಸರ್ಕಾರಕ್ಕೆ ನಮ್ಮ ಬೆಂಬಲ ಹಿಂಪಡೆಯುವ ಕುರಿತು ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.