ADVERTISEMENT

ಬೆಣ್ಣೆತೊರಾ ಜಲಾಶಯದಿಂದ ನೀರು ಬಿಡುಗಡೆ: ಹೆಬ್ಬಾಳ ಸೇತುವೆ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2017, 5:58 IST
Last Updated 14 ಜೂನ್ 2017, 5:58 IST
ಚಿತ್ತಾಪುರ ತಾಲ್ಲೂಕು ಹೆಬ್ಬಾಳ ಸೇತುವೆ ಬುಧವಾರ ಮುಳುಗಡೆ ಆಗಿರುವುದು
ಚಿತ್ತಾಪುರ ತಾಲ್ಲೂಕು ಹೆಬ್ಬಾಳ ಸೇತುವೆ ಬುಧವಾರ ಮುಳುಗಡೆ ಆಗಿರುವುದು   

ಕಲಬುರ್ಗಿ: ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಬೆಣ್ಣೆತೊರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಜಲಾಶಯದಿಂದ 2881 ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ಚಿತ್ತಾಪುರ ತಾಲ್ಲೂಕು ಹೆಬ್ಬಾಳ ಸೇತುವೆ ಬುಧವಾರ ಮುಳುಗಡೆಯಾಗಿದ್ದು, ಜನರ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

ಬೆಣ್ಣೆತೊರಾ ಜಲಾಶಯದ ಒಳ ಹರಿವು 1632 ಕ್ಯೂಸೆಕ್ ಇದ್ದು, ಹೊರ ಹರಿವು 2881 ಕ್ಯೂಸೆಕ್ ಇದೆ.

ADVERTISEMENT

ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ನದಿಗೆ ಇಳಿಯಬಾರದು ಎಂದು ಜಲಾಶಯದ ಅಧಿಕಾರಿಗಳು ಮಂಗಳವಾರವೇ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.