ಬೆಂಗಳೂರು: ‘ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೊಸೂರು ಗ್ರಾಮದಿಂದ ಹರಿಯುವ ಬೆಣ್ಣೆಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ ಮಾಡಬೇಕು. ಈ ದಿಸೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು’ ಎಂದು ‘ರೈತ ಸೇನಾ ಕರ್ನಾಟಕ’ ಒತ್ತಾಯಿಸಿದೆ.
ಈ ಕುರಿತಂತೆ ‘ಕರ್ನಾಟಕ ಗಡಿ ರಕ್ಷಣಾ ಹಾಗೂ ನದಿಗಳ ಆಯೋಗ’ದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರನ್ನು ಭೇಟಿ ಮಾಡಿದ ರೈತ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ವೀರೇಶ್ ಸೊಬರದ ಮಠ ಸ್ವಾಮೀಜಿ ನೇತೃತ್ವದ ನಿಯೋಗವು, ‘ಉತ್ತರ ಕರ್ನಾಟಕದ ರೈತರ ಪಾಲಿಗೆ ಉಪಯುಕ್ತವಾದ ಈ ಯೋಜನೆಯನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು’ ಎಂದು ಒತ್ತಾಯಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.