ಬೆಳಗಾವಿ: ಇಲ್ಲಿನ ಕೋಟೆ ಕೆರೆ ದಂಡೆಯಲ್ಲಿ ಸ್ಥಾಪಿಸಿರುವ ದೇಶದ ಅತಿ ಎತ್ತರದ್ದು ಎನ್ನಲಾದ (110 ಮೀಟರ್) ಧ್ಚಜಸ್ತಂಭದಲ್ಲಿ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೋಮವಾರ ಬೆಳಗ್ಗೆ ಧ್ವಜಾರೋಹಣ ನೆರವೇರಿಸಿದರು. ಈ ಕ್ಷಣಕ್ಕೆ ಸಾವಿರಾರು ಮಂದಿ ನಾಗರಿಕರು, ನಗರದ ಧರ್ಮಗುರುಗಳು, ಗಣ್ಯರು, ಅಧಿಕಾರಿಗಳು ಸಾಕ್ಷಿಯಾದರು. ಮರಾಠಾ ಲಘು ಪದಾತಿದಳದ ಬ್ಯಾಂಡ್ನವರು ದೇಶಭಕ್ತಿ ಗೀತೆ ನುಡಿಸುವ ಮೂಲಕ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.
ರಮೇಶ ಜಾರಕಿಹೊಳಿ ಮಾತನಾಡಿ, ‘ದೇಶದ ಅತಿ ಎತ್ತರದ ಧ್ವಜಸ್ತಂಭವನ್ನು ನಗರ, ರಾಜ್ಯ ಹಾಗೂ ದೇಶಕ್ಕೆ ಸಮರ್ಪಿಸುವುದಕ್ಕೆ ಹೆಮ್ಮೆಯಾಗುತ್ತದೆ. ದೇಶ ಯಾರೋ ಒಬ್ಬರದಲ್ಲ. ಎಲ್ಲರ ದೇಶ. ಎಲ್ಲರೂ ಅಣ್ಣ ತಮ್ಮಂದಿರಂತೆ ಸೌಹಾರ್ದದಿಂದ ಇರಬೇಕು. ಆಗ ರಾಮರಾಜ್ಯ ಸ್ಥಾಪನೆ ಸಾಧ್ಯ’ ಎಂದರು.
‘ಮುಂದಿನ ದಿನಗಳಲ್ಲಿ ಮತ್ತಷ್ಟು ಅನುಧಾನವನ್ನು ಬಿಡುಗಡೆಗೊಳಿಸಿ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು’ ಎಂದರು.
ಶಾಸಕ ಫಿರೋಜ್ ಸೇಠ್ ಮಾತನಾಡಿ, ‘ದೇಶ ಹಾಗೂ ತ್ರಿವರ್ಣ ಧ್ವಜ ಎರಡು ಒಂದೇ. ಎಲ್ಲರೂ ಸಮಾನರು’ ಎಂದರು.
ಇದನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.