ADVERTISEMENT

ಬೇಲೆಕೇರಿ ಪ್ರಕರಣ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ (ಬಳ್ಳಾರಿ ಜಿಲ್ಲೆ) ಶಾಸಕ ಆನಂದ ಸಿಂಗ್ ಅವರ ಸಂಬಂಧಿ ಶಾಮ ಸಿಂಗ್ ಮತ್ತು ಯರ‌್ರಿ ಸ್ವಾಮಿ ಎಂಬುವರನ್ನು ಸಿಬಿಐ ಮಂಗಳವಾರ ಬಂಧಿಸಿದೆ.

ನಾಪತ್ತೆ ಪ್ರಕರಣದಲ್ಲಿ ಡ್ರೀಂ ಲಾಜಿಸ್ಟಿಕ್ಸ್ ಕಂಪೆನಿಯ ಪಾತ್ರಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇವರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಅದಿರು ನಾಪತ್ತೆ ಪ್ರಕರಣದಲ್ಲಿ ಇದುವರೆಗೆ ಐದು ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ. ಒಂದರಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.