ADVERTISEMENT

ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 9:25 IST
Last Updated 21 ಏಪ್ರಿಲ್ 2018, 9:25 IST
ಬೇಳೂರು ಗೋಪಾಲಕೃಷ್ಣ  ಕಾಂಗ್ರೆಸ್ ಸೇರ್ಪಡೆ
ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ   

ಬೆಂಗಳೂರು: ಸಾಗರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬೇಳೂರು ಗೋಪಾಲಕೃಷ್ಣ ಭಾನುವಾರ ಕಾಂಗ್ರೆಸ್‌ ಸೇರಲಿದ್ದಾರೆ.

ಬಿಜೆಪಿ ಟಿಕೆಟ್‌ ಕೈತಪ್ಪಿರುವ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ಚರ್ಚಿಸಿದರು.

2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ತಮ್ಮ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರಿಗೆ ಸೋಲಿನ ರುಚಿ ತೋರಿಸಿದ್ದರು. 2013ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಈಗ ಮಾವನನ್ನು ಗೆಲ್ಲಿಸಲು ಕಾಂಗ್ರೆಸ್ ಸೇರಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.