ಕುಣಿಗಲ್: ಇದ್ದ ಒಂದೇ ಬೋನ್ ಬಳಸಿ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಯಶಸ್ವಿಯಾದರು.
ಹುಲಿಯೂರುದುರ್ಗ ಹೋಬಳಿ ಚಲಮಸಂದ್ರ ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅನೇಕ ಜಾನುವಾರುಗಳು ಬಲಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಚಲಮಸಂದ್ರ, ಹೊನ್ನಮಾಚನಹಳ್ಳಿ, ನಿಡಸಾಲೆ, ಬೀಸೆಗೌಡನದೊಡ್ಡಿ ಗ್ರಾಮಸ್ಥರು ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಚಿರತೆ ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು.
ಮಂಗಳವಾರ ಮೇಕೆಯನ್ನು ಬೋನಿಗೆ ಕಟ್ಟಿದ್ದರು. ಆಹಾರ ಅರಸಿ ಬಂದ ಚಿರತೆ, ಬೋನ್ನಲ್ಲಿ ಸಿಕ್ಕಿಬಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.