ADVERTISEMENT

ಬೋನಿಗೆ ಬಿದ್ದ ಮತ್ತೊಂದು ಚಿರತೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:00 IST
Last Updated 18 ಡಿಸೆಂಬರ್ 2013, 20:00 IST
ಎಚ್‌.ಡಿ.ಕೋಟೆ ತಾಲ್ಲೂಕಿನ ಹಿರೇನಂದಿ ಗ್ರಾಮದ ಶಿವಣ್ಣ ಎಂಬುವವರ ಜಮೀನಿ ನಲ್ಲಿ ಹೆಣ್ಣು ಚಿರತೆ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬುಧವಾರ ಬಿತ್ತು.
ಎಚ್‌.ಡಿ.ಕೋಟೆ ತಾಲ್ಲೂಕಿನ ಹಿರೇನಂದಿ ಗ್ರಾಮದ ಶಿವಣ್ಣ ಎಂಬುವವರ ಜಮೀನಿ ನಲ್ಲಿ ಹೆಣ್ಣು ಚಿರತೆ ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬುಧವಾರ ಬಿತ್ತು.   

ಎಚ್.ಡಿ. ಕೋಟೆ: ತಾಲ್ಲೂಕಿನ ಕಂಚ ಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇನಂದಿ ಗ್ರಾಮದ ಜಮೀನ ಒಂದರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಹೆಣ್ಣು ಚಿರತೆಯೊಂದು ಬುಧವಾರ ಬಿದ್ದಿದೆ.

ಹೀರೇನಂದಿ ಗ್ರಾಮದ ಶಿವಣ್ಣ ಎಂಬುವವರ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಈ ಮೊದಲು ನ.26ರಂದು ಇದೇ ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿತ್ತು.

ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಮಂಜುನಾಥ್, ಜಮೀನಿಗೆ ಹತ್ತಿರವಾಗಿ ಯಾವುದೇ ಕಾಡು ಇಲ್ಲ. ಆದರೆ, ಜಮೀನಿನಲ್ಲಿರುವ ಕಬ್ಬಿನ ಗದ್ದೆಯಲ್ಲಿ ಚಿರತೆ ಕಂಡು ಬರುತ್ತಿತ್ತು. ಅಕ್ಕಪಕ್ಕದ ಜಮೀನುಗಳಿಗೆ ಬರುವ ಜಾನುವಾರುಗಳನ್ನು ಹಿಡಿದು ತಿನ್ನು ತ್ತಿತ್ತು. ಜಮೀನಿನ ಮಾಲೀಕ ಶಿವಯ್ಯ ಸೇರಿದಂತೆ ಗ್ರಾಮಸ್ಥರು ಚಿರತೆ ಇರುವ ಕುರಿತು ದೂರು ಕೊಟ್ಟಿದ್ದರು.

2 ತಿಂಗಳ ಹಿಂದೆ ಬೋನನ್ನು ತಂದು ಇಡ ಲಾಗಿತ್ತು. ಇಟ್ಟ 1 ತಿಂಗಳಲ್ಲಿ ಒಂದು ಚಿರತೆ ಬೋನಿಗೆ ಬಿದ್ದಿತ್ತು. ಈಗ ಮತ್ತೊಂದು ಚಿರತೆ ಬೋನಿಗೆ ಬಿದ್ದಿದೆ. ಇನ್ನೂ ಒಂದು ಚಿರತೆ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಹಾಗಾಗಿ, ಬೋನನ್ನು ಮತ್ತೆ ಅಲ್ಲೇ ಇಡಲಾಗು ವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.