ADVERTISEMENT

ಭದ್ರತಾ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಮಗನಿಂದಲೇ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2011, 18:10 IST
Last Updated 19 ಫೆಬ್ರುವರಿ 2011, 18:10 IST

ಬೆಂಗಳೂರು: ನಗರದ ಗಣ್ಯ ವ್ಯಕ್ತಿಗಳ ಭದ್ರತಾ ವಿಭಾಗದಲ್ಲಿ (ವಿವಿಐಪಿ ಸೆಕ್ಯುರಿಟಿ) ಸಬ್ ಇನ್‌ಸ್ಪೆಕ್ಟರ್ ಆಗಿದ್ದ ವೀರಭದ್ರಯ್ಯ (57) ಎಂಬುವರಿಗೆ ಅವರ ಮಗನೇ ನಿರ್ದಯವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ರಾಜಾಜಿನಗರದ ನವರಂಗ್ ವೃತ್ತದ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಹಣಕಾಸು ವಿಷಯದಲ್ಲಿನ ಭಿನ್ನಾಭಿಪ್ರಾಯದ ಕಾರಣ ಅವರ ಮಗ ಬಿ.ವಿ.ಯಶವಂತ್ (23) ಎಂಬಾತ ಈ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.