ADVERTISEMENT

ಮಂಗಳೂರಿನಲ್ಲೂ ಮಳೆಯ ಆರ್ಭಟ: ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2018, 6:39 IST
Last Updated 14 ಜೂನ್ 2018, 6:39 IST
ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಮಳೆಯಿಂದ ರಸ್ತೆ ಮೇಲೆ ನೀರು ಹರಿಯುತ್ತಿದೆ
ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಮಳೆಯಿಂದ ರಸ್ತೆ ಮೇಲೆ ನೀರು ಹರಿಯುತ್ತಿದೆ   

ಮಂಗಳೂರು: ಜಿಲ್ಲೆಯಾದ್ಯಂತ ಗುರುವಾರ ಬೆಳಿಗ್ಗೆಯಿಂದಲೇ ಮಳೆ ಆರ್ಭಟ ಹೆಚ್ಚಾಗಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ‌ ತಾಲ್ಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಹಲವೆಡೆ ಮಳೆ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಮಂಗಳೂರಿನಲ್ಲಿಯೂ ಮಳೆ ಜೋರಾಗಿದ್ದು, ಬೆಳಿಗ್ಗೆ ಶಾಲೆಗಳಿಗೆ ತೆರಳಲು ಮಕ್ಕಳು ತೊಂದರೆ ಅನುಭವಿಸುವಂತಾಯಿತು.

ಗುರುವಾರ ಇಡೀ ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.