ADVERTISEMENT

ಮಂಗಳೂರು, ಉಡುಪಿಯಲ್ಲಿ ವರುಣನ ಆರ್ಭಟ: ಶಾಲಾ ಕಾಲೇಜುಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 29 ಮೇ 2018, 9:51 IST
Last Updated 29 ಮೇ 2018, 9:51 IST
ಚಿತ್ರ ಕೃಪೆ: ಆನಂದ್ ಹೆಗ್ಡೆ (ಟ್ವಿಟರ್ ಖಾತೆ)
ಚಿತ್ರ ಕೃಪೆ: ಆನಂದ್ ಹೆಗ್ಡೆ (ಟ್ವಿಟರ್ ಖಾತೆ)   

ಮಂಗಳೂರು/ ಉಡುಪಿ:  ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬೆನ್ನಲ್ಲೆ ಕರ್ನಾಟಕ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಮಂಗಳೂರು ಮತ್ತು ಉಡುಪಿ ಜಿಲ್ಲೆಯಾದ್ಯಾಂತ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಂಗಳೂರು ಮತ್ತು ಉಡುಪಿ ನಗರಗಳ ಹಲವು ಕಡೆ ಮನೆಗಳು ಮುಳುಗಡೆಯಾಗಿವೆ. ಬೆಳಗ್ಗೆಯಿಂದ ಮಳೆ ಎಡಬಿಡದೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಬಹುತೇಕ ರಸ್ತೆಗಳು ಮುಳುಗಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT