ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಮಂಜಳ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರೊಂದಿಗೆ ಶನಿವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಕ್ಸಲ್ ನಿಗ್ರಹ ಪಡೆಯ ಕಾನ್ಸ್ಟೇಬಲ್ ಮಹದೇವ ಎಸ್. ಮಾನೆ ಅವರ ಮಕ್ಕಳ ಶಿಕ್ಷಣಕ್ಕೆ ಸರ್ಕಾರ ನೆರವು ನೀಡಲಿದೆ ಎಂದು ಗೃಹ ಸಚಿವ ಆರ್. ಅಶೋಕ ಘೋಷಿಸಿದರು.
ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಮಾನೆ ಕುಟುಂಬದವರು ಈಗ ವಾಸಿಸುತ್ತಿರುವ ಸರ್ಕಾರಿ ನಿವಾಸದಲ್ಲೇ ಮುಂದೆಯೂ ವಾಸಿಸಲು ಅನುವು ಮಾಡಿಕೊಡಲಾಗುವುದು. ಅಲ್ಲದೆ, ಅವರ ಮಕ್ಕಳಿಗೆ ಸರ್ಕಾರಿ ಕೆಲಸ ನೀಡಲಾಗುವುದು~ ಎಂದು ಅಶೋಕ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.