ADVERTISEMENT

ಮಠಕ್ಕೆ ಮರಳಿದ ಶರಣರು

​ಪ್ರಜಾವಾಣಿ ವಾರ್ತೆ
Published 16 ಜೂನ್ 2018, 18:41 IST
Last Updated 16 ಜೂನ್ 2018, 18:41 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ಚಿತ್ರದುರ್ಗ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಶನಿವಾರ ಮಠಕ್ಕೆ ಮರಳಿದರು.

ಬೆಂಗಳೂರಿನ ಬಿಜೆಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಂಜೆ 6ಕ್ಕೆ ಮಠಕ್ಕೆ ಬಂದರು. ಮಠದ ಆವರಣದಲ್ಲಿ ಸೇರಿದ್ದ ಭಕ್ತರು ಶರಣರನ್ನು ಬರಮಾಡಿಕೊಂಡು ಆರೋಗ್ಯ ವಿಚಾರಿಸಿದರು.

ಹವಾಮಾನ ಬದಲಾವಣೆ ಪರಿಣಾಮ ಜೂನ್‌ 8ರಂದು ಶರಣರಿಗೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ನಾಲ್ಕು ದಿನ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ್ದರು. ಆರೋಗ್ಯ ಸುಧಾರಿಸದೆ ಇರುವುದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.