ADVERTISEMENT

ಮಣ್ಣು ಕುಸಿದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2018, 19:30 IST
Last Updated 26 ಫೆಬ್ರುವರಿ 2018, 19:30 IST

ಹರಿಹರ: ನಗರದ ಕಾಳಿದಾಸ ನಗರದ ಪೆಟ್ರೋಲ್ ಬಂಕ್‍ ರಸ್ತೆಯಲ್ಲಿ ಸೋಮವಾರ ಯುಜಿಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಮೃತ ಕಾರ್ಮಿಕ ಧಾರವಾಡ ಮೂಲದವರು ಎನ್ನಲಾಗಿದ್ದು, ಸಂಪೂರ್ಣ ವಿವರ ತಿಳಿದುಬಂದಿಲ್ಲ. ಇ-ಫಿಲ್‍ ಸಂಸ್ಥೆಗೆ ಒಳಚರಂಡಿ ಕಾಮಗಾರಿ ನೀಡಲಾಗಿತ್ತು. ಈ ಸಂಸ್ಥೆ ಉಪ ಗುತ್ತಿಗೆ ನೀಡಿತ್ತು. ಮೃತ ಕಾರ್ಮಿಕ ಮೂರು ದಿನಗಳ ಹಿಂದಷ್ಟೇ ಕೆಲಸಕ್ಕೆ ಸೇರಿದ್ದು, ಆತನ ಹೆಸರು ಹಾಗೂ ವಿಳಾಸದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೊಮ್ಮೆ ಯುಜಿಡಿ ಕಾಮಗಾರಿ ನಡೆಸುವಾಗಲೂ ಒಬ್ಬರು ಮೃತಪಟ್ಟಿದ್ದರು. ಕಾಮಗಾರಿ ನಡೆಸುವ ಗುತ್ತಿಗೆದಾರ ಸಂಸ್ಥೆಗಳು ಕಾರ್ಮಿಕರ ಸುರಕ್ಷತಾ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸದಿರುವುದೇ ಇಂತಹ ಅವಘಡಗಳಿಗೆ ಕಾರಣ ಎಂದು ನಗರಸಭೆ ಸದಸ್ಯ ಬಿ.ಅಲ್ತಾಫ್‍ ದೂರಿದರು.

ADVERTISEMENT

ಘಟನಾ ಸ್ಥಳಕ್ಕೆ ನಗರ ಠಾಣೆ ಪಿಎಸ್‍ಐ ಕೆ. ಶ್ರೀಧರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.