ಧಾರವಾಡ: ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದ ಬಳಿ ಶನಿವಾರ ರೂ. 36,000 ಮೌಲ್ಯದ ಮದ್ಯ ವಶಪಡಿಸಿಕೊಂಡು, ನವಲಗುಂದದ ಇಬ್ಬರನ್ನು ಬಂಧಿಸಿ, ಬೈಕ್ ವಶಪಡಿಸಿಕೊಳ್ಳಲಾಗಿದೆ.
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬುಗಟೆ ಆಲೂರು ಚೆಕ್ ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ರೂ. 4.15 ಲಕ್ಷ ನಗದನ್ನು ವಶಪಡಿಸಿಕೊಂಡು, ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದ ಇಬ್ಬರನ್ನು ಬಂಧಿಸಿ, ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ: ಜಿಲ್ಲೆಯ ಪಂಜದಲ್ಲಿ ಗುತ್ತಿಗೆದಾರರೊಬ್ಬರು ಬ್ಯಾಂಕಿನಿಂದ ರೂ 5 ಲಕ್ಷ ಹಣ ಪಡೆದು ಹಿಂತಿರುಗುತ್ತಿದ್ದಾಗ ಪೊಲೀಸರು ಹಣವನ್ನು ಮುಟ್ಟುಗೋಲು ಹಾಕಿದ ಘಟನೆ ಶನಿವಾರ ನಡೆದಿದೆ.
ಎಣ್ಮೂರಿನ ಜೆಸಿಬಿ ಮಾಲೀಕ ಷಣ್ಮುಖ ಕುಮಾರ್ ಎಂಬುವವರು ಪಂಜದ ಸಿಂಡಿಕೇಟ್ ಬ್ಯಾಂಕಿನಿಂದ ರೂ 5 ಲಕ್ಷ ಪಡೆದು ಹಿಂತಿರುಗುತ್ತಿದ್ದಾಗ ಸುಬ್ರಹ್ಮಣ್ಯ ಪೊಲೀಸರು ಹಣವನ್ನು ಮುಟ್ಟುಗೋಲು ಹಾಕಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭ 50 ಸಾವಿರಕ್ಕಿಂತ ಹೆಚ್ಚಿಗೆ ನಗದನ್ನು ಕೊಂಡೊಯ್ಯಲು ಅನುಮತಿ ಇಲ್ಲದೆ ಇರುವುದರಿಂದ ಹಣವನ್ನು ಮುಟ್ಟುಗೋಲು ಹಾಕಲಾಗಿದೆ. ನಗದನ್ನು ಸುಳ್ಯ ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.