ADVERTISEMENT

ಮದ್ಯ ನಿಷೇಧಿಸಲು ಆಗ್ರಹ: ರಾಜ್ಯಮಟ್ಟದ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2017, 19:30 IST
Last Updated 27 ಅಕ್ಟೋಬರ್ 2017, 19:30 IST
ಮೇಧಾ ಪಾಟ್ಕರ್‌
ಮೇಧಾ ಪಾಟ್ಕರ್‌   

ರಾಯಚೂರು: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ಅ.29 ರಂದು ರಾಜ್ಯಮಟ್ಟದ ಬೃಹತ್‌ ಸಮಾವೇಶ ಏರ್ಪಡಿಸಲಾಗಿದ್ದು, 30 ಸಂಘಟನೆಗಳಿಂದ ಸುಮಾರು 50 ಸಾವಿರ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್‌, ಸಿರಿಗೆರೆ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬೀದರ್‌ನ ಬಸವ ಸೇವಾ ಪ್ರತಿಷ್ಠಾನದ ಗಂಗಾಂಬಿಕ ಅಕ್ಕ, ಆಳಂದ ಮಹಿಳಾಪರ ಹೋರಾಟಗಾರ್ತಿ ಸಿಸ್ಟರ್‌ ಟೀನಾ, ಇಳಕಲ್‌ನ ಪ್ರಗತಿಪರ ಚಿಂತಕ ಲಾಲ್‌ಹುಸೇನ್‌ ಕಂದಗಲ್‌ ಅವರು ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

ನಗರದಲ್ಲಿ ಬೃಹತ್‌ ರ್‍ಯಾಲಿ ನಡೆಸಿ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಮಾವೇಶ ಆಯೋಜಿಸಿರುವ ಮದ್ಯ ನಿಷೇಧ ಆಂದೋಲನ ಕರ್ನಾಟಕದ ಪದಾಧಿಕಾರಿಗಳು ‘ಪ್ರಜಾವಾಣಿ’ಗೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.