
ಪ್ರಜಾವಾಣಿ ವಾರ್ತೆನವದೆಹಲಿ: ತಮಿಳು ಸಾಹಿತಿ ಡಾ.ಎ.ಎ.ಮನವಳನ್ ಅವರು 2011ನೇ ಸಾಲಿನ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಆರ್.ಸಿ.ಲಹೋಟಿ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಕೆ.ಕೆ.ಬಿರ್ಲಾ ಪ್ರತಿಷ್ಠಾನವು ರಾಷ್ಟ್ರದ ಶ್ರೇಷ್ಠ ಕೃತಿಗಳಿಗೆ 1991ರಿಂದ ನೀಡುತ್ತಾ ಬಂದಿರುವ ಈ ಪ್ರಶಸ್ತಿಯು ರೂ 7.5 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ.
ಕಳೆದ ಬಾರಿ ಕನ್ನಡದ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಈ ಪ್ರಶಸ್ತಿಗೆ ಪಾತ್ರರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.