ADVERTISEMENT

ಮನವಳನ್‌ಗೆ ಸರಸ್ವತಿ ಸಮ್ಮಾನ್

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2012, 19:30 IST
Last Updated 24 ಮಾರ್ಚ್ 2012, 19:30 IST

ನವದೆಹಲಿ: ತಮಿಳು ಸಾಹಿತಿ ಡಾ.ಎ.ಎ.ಮನವಳನ್ ಅವರು 2011ನೇ ಸಾಲಿನ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಆರ್.ಸಿ.ಲಹೋಟಿ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಕೆ.ಕೆ.ಬಿರ್ಲಾ ಪ್ರತಿಷ್ಠಾನವು ರಾಷ್ಟ್ರದ ಶ್ರೇಷ್ಠ ಕೃತಿಗಳಿಗೆ 1991ರಿಂದ ನೀಡುತ್ತಾ ಬಂದಿರುವ ಈ ಪ್ರಶಸ್ತಿಯು ರೂ 7.5 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ.

ಕಳೆದ ಬಾರಿ ಕನ್ನಡದ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಈ ಪ್ರಶಸ್ತಿಗೆ ಪಾತ್ರರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.