ADVERTISEMENT

ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ: ಮೆರವಣಿಗೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2018, 5:39 IST
Last Updated 4 ಮಾರ್ಚ್ 2018, 5:39 IST
ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ: ಮೆರವಣಿಗೆಗೆ ಚಾಲನೆ
ಮಳಖೇಡದಲ್ಲಿ ರಾಷ್ಟ್ರಕೂಟ ಉತ್ಸವ: ಮೆರವಣಿಗೆಗೆ ಚಾಲನೆ   

ಕಲಬುರ್ಗಿ: ಜಿಲ್ಲೆಯ ಸೇಡಂ ತಾಲ್ಲೂಕು ಮಳಖೇಡನಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದೇ ಮೊದಲ ಬಾರಿಗೆ ಹಮ್ಮಿಕೊಂಡಿರುವ ರಾಷ್ಟ್ರಕೂಟ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಇಲ್ಲಿ ಚಾಲನೆ ನೀಡಿದರು.

ಉತ್ಸವದ ಅಂಗವಾಗಿ ಮಳಖೇಡ ಕೋಟೆಯಿಂದ ಅದ್ಧೂರಿ ಮೆರವಣಿಗೆ ನಡೆಯಿತು.

ಹಲಗೆ ವಾದನ, ಪಟ ಕುಣಿತ, ಡೊಳ್ಳು, ಗಾರುಡಿ ಗೊಂಬೆ ಕಲಾವಿದರು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದಾರೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.