
ಪ್ರಜಾವಾಣಿ ವಾರ್ತೆಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದಿಂದ ಎರಡು ದಿನ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ಈಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಬೆಳಗಾವಿ, ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಶುಕ್ರವಾರ ಬೆಳಗಾವಿ ಜಿಲ್ಲೆಯ ಗೋಕಾಕ್ ಮತ್ತು ಅಥಣಿ, ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮಳೆಯಿಂದ ಸಂತ್ರಸ್ತರಾದ ಕುಟುಂಬ ಗಳ ಸದಸ್ಯರನ್ನು ಭೇಟಿ ಮಾಡಲಿದ್ದಾರೆ.
ಶನಿವಾರ (ಮಾ.15) ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನಲ್ಲಿ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.