ಬೆಂಗಳೂರು: ‘ಮಹದಾಯಿ ಸಮಸ್ಯೆ ಕಾಂಗ್ರೆಸ್ನ ಪಾಪದ ಕೂಪ’. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 2–3 ದಿನಗಳಲ್ಲೇ ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾನ ಮಾಡಿದರು.
ಬೆಂಗಳೂರು ಪ್ರೆಸ್ ಕ್ಲಬ್ ನಗರದಲ್ಲಿ ಭಾನುವಾರ ಆಯೋಜಿಸಿದ್ದ ‘ಮಾತು–ಮಂಥನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದ ಮುಖ್ಯಮಂತ್ರಿಗಳ ಮನವೊಲಿಸುತ್ತೇನೆ’ ಎಂದರು.
‘ಕರ್ನಾಟಕಕ್ಕೆ ಹನಿ ನೀರನ್ನೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗೋವಾ ಚುನಾವಣಾ ಸಂದರ್ಭದಲ್ಲಿ 2007ರಲ್ಲಿ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.